ಯುವಕ ಮಂಡಲ(ರಿ.) ಇರಾ ಇದರ ವತಿಯಿಂದ ತುಳುನಾಡಿನ ಸಾಂಪ್ರದಾಯಿಕ ಕ್ರೀಡಾ ಕಾರ್ಯಕ್ರಮ ಕೆಸರ್ಡೊಂಜಿ ದಿನ ಇದೇ ಭಾನುವಾರ ದಿನಾಂಕ 04-09-2022ರಂದು ಇರಾ ಬಾವಬೀಡಿನ ಗದ್ದೆಯಲ್ಲಿ ನಡೆಯಿತು. ಬಾವಬೀಡು ದಿ| ಗೋಪಿ ಎಸ್ ಭಂಡಾರಿ ವೇದಿಕೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾವಬೀಡು ಶ್ರೀ ವೇಣುಗೋಪಾಲ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮುಖ್ಯ ಅತಿಥಿಗಳಾಗಿದ್ದ, ಪಿಲಿಕುಳ ವನ್ಯದಾಮದ ನಿರ್ದೇಶಕರಾದ ಶ್ರೀ ಜಯಪ್ರಕಾಶ್ ಭಂಡಾರಿ ಬಾವಬೀಡು ಮಾತನಾಡಿ ಯುವಕ ಮಂಡಲದ ಈ ಕಾರ್ಯ ವನ್ನು ಶ್ಲಾಘಿಸಿ ಶುಭ ಹಾರೈಸಿದರು. ಹಾಗೆಯೇ ಮತ್ತೋರ್ವ ಅತಿಥಿ ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಡಾ| ಸತೀಶ್ ಭಂಡಾರಿ ಬಾವಬೀಡು ಮಾತನಾಡಿ ಮುಂದಿನ ಯುವ ಪೀಳಿಗೆಗೆ ಇಂತಹ ಕಾರ್ಯಕ್ರಮದ ಅವಶ್ಯಕತೆಯನ್ನು ವಿವರಿಸಿದರು. ಹಾಗೆಯೇ ಶಾಸಕರಾದ ಯು.ಟಿ. ಖಾದರ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪ್ರಶಾಂತ್ ಕಾಜವ, ಬಂಟ್ವಾಳ ತಾಲೂಕು ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷ ರಾದ ಚಂದ್ರಹಾಸ ಕರ್ಕೇರ, ಇರಾ ಗ್ರಾಮ ಪಂಚಾಯತ್ ನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಅಬ್ದುಲ್ ರಜಾಕ್ ಕುಕ್ಕಾಜೆ, ಮಹಾದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಶ್ರೀ ಪುಷ್ಪರಾಜ ಕುಕ್ಕಾಜೆ, ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ಶ್ರೀ ಸುಭೋದ್ ಭಂಡಾರಿ ಬಾವಬೀಡು, ಶ್ರೀ ಐ ನೇಮು ಪೂಜಾರಿ ಆಚೆಬೈಲು ಶುಭ ಹಾರೈಸಿದರು. ಸಾಯಂಕಾಲ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಕಲ್ಲಾಡಿ, ಶ್ರೀ ಜಗದೀಶ್ ಶೆಟ್ಟಿ ಇರಾಗುತ್ತು, ಶ್ರೀ ವೈ.ಬಿ ಸುಂದರ್, ಚಿಣ್ಣರಲೋಕ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ರಾದ ಶ್ರೀ ಚಂದ್ರಹಾಸ ರೈ ಬಾಲಾಜಿಬೈಲು, ಬಿ.ಜೆ.ಪಿ ಮುಖಂಡರಾದ ಶ್ರೀ ಸತೀಶ್ ಕುಂಪಲ, ಶ್ರೀ ಹೇಮಂತ್ ಶೆಟ್ಟಿ, ಶ್ರೀ ಸಂತೋಷ್ ಕುಮಾರ್ ರೈ ಬೋಳ್ಯಾರ್, ಕಲ್ಲಾಡಿ ವಿಠಲ ಶೆಟ್ಟಿ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲು, ಕಾರ್ಯದರ್ಶಿಗಳಾದ ಶ್ರೀ ಗಣೇಶ್ ಕೊಟ್ಟಾರಿ ಸಂಪಿಲ, ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಅಶ್ವಿತ್ ಕೊಟ್ಟಾರಿ ವಿಜೇತರಿಗೆ ಬಹುಮಾನ ವಿತರಿಸಿದರು. ಊರಿನ ಗಣ್ಯರು ಹಾಗು ಯುವಕ ಮಂಡಲದ ಸರ್ವ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಯುವಕ ಮಂಡಲದ ಹಿರಿಯ ಸದಸ್ಯರಾದ ಶ್ರೀ ಯತಿರಾಜ್ ಶೆಟ್ಟಿ ಸಂಪಿಲ, ಶ್ರೀ ನಿತೇಶ್ ಶೆಟ್ಟಿ ಸಂಪಿಲ ಹಾಗು ಶ್ರೀ ಶಿಶನ್ ಕೌಡೂರು ಕಾರ್ಯ ಕ್ರಮ ನಿರೂಪಿಸಿದರು









